ಬೆಂಗಳೂರು : ಅಕ್ರಮವಾಗಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ, ಆಂಧ್ರಪ್ರದೇಶದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಹೌದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಬಾರಿ ಆಂಧ್ರಪ್ರದೇಶದ ಚಂದ್ರಗಿರಿ ಶಾಸಕರಾಗಿದ್ದ ಹೆವಿ ರೆಡ್ಡಿ ಭಾಸ್ಕರ ರೆಡ್ಡಿ, ಇದೀಗ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ. ಈ ವೇಳೆ ಚೆವಿರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಆಂಧ್ರ ಪ್ರದೇಶದ ಅಬಕಾರಿ ಹಗರಣದ ಆರೋಪಿಯಾಗಿದ್ದು, ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕುರಿತು ಏರ್ಪೋರ್ಟ್ ಪೊಲೀಸರು ಆಂಧ್ರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.