ಬೆಂಗಳೂರು: ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ.
ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.
ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ.
ಅಂದಹಾಗೇ ಮೂರು ದಿನಗಳ ಹಿಂದೆ ಐಪಿಎಸ್ ಫ್ಯಾಮಿಲಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಪತ್ನಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದರು. ನನ್ನ ಪತಿ ನನಗೆ, ಮಗಳಿಗೆ ತುಂಬಾ ಚಿತ್ರಹಿಂಸೆ ಕೊಡ್ತಿದ್ದಾರೆ. ಮನೆಯಲ್ಲಿ ನನ್ನ ಪತಿ ಗನ್ ಹಿಡಿದುಕೊಂಡು ಓಡಾಡ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡ್ತೀನಿ ಎಂದು ಭಯಪಡಿಸ್ತಿದ್ದಾರೆ. ಪತಿ ವಿರುದ್ಧ ಸುಮೋಟೋ ಕೇಸ್ ದಾಖಲಿಸುವಂತೆ ಮನವಿ ಮಾಡಿದ್ದರು ಎಂಬುದಾಗಿ ತಿಳಿದು ಬಂದಿದೆ.