ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ.
ರೇವಣ್ಣ ಅವರಿಗೆ ವಿಧಿಸಿರುವ ಷರತ್ತುಗಳು ಹೀಗಿವೆ:
- 5 ಲಕ್ಷ ರೂ. ಬಾಂಡ್.
- ಇಬ್ಬರು ವ್ಯಕ್ತಿಗಳ ಶ್ಯೂರಿಟಿ.
- ಪ್ರಕರಣ ಇತ್ಯರ್ಥವಾಗುವವರೆಗೆ ಕೆ.ಆರ್. ನಗರ ಪ್ರವೇಶಿಸುವಂತಿಲ್ಲ.
- ಕೋರ್ಟ್ಗೆ ಪಾಸ್ಪೋರ್ಟ್ ಸಲ್ಲಿಸಬೇಕು.
- ಸಾಕ್ಷಿ ನಾಶಪಡಿಸುವಂತಿಲ್ಲ.
- ವಿದೇಶಕ್ಕೆ ಹೋಗುವಂತಿಲ್ಲ.
- ಎಸ್ಐಟಿ ತನಿಖೆಗೆ ಸಹಕರಿಸಬೇಕು.
- ಪ್ರತಿ ತಿಂಗಳ ಎರಡನೇ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು.
- ಬೆಳಗ್ಗೆ 9ರಿಂದ 5 ಗಂಟೆಯ ಒಳಗೆ ಹಾಜರಾಗಬೇಕು.
- ಇಂಥದ್ದೇ ಅಪರಾಧ ಕೃತ್ಯದಲ್ಲಿ ಮತ್ತೆ ಭಾಗಿಯಾಗಬಾರದು.