BREAKING: ಕರೆಯಲ್ಲಿ ಈಜಾಡಲು ಹೋಗಿದ್ದ ನಾಲ್ವರು ಮಕ್ಕಳು ನೀರು ಪಾಲು!

ಹಾಸನ: ಕೆರೆ ಬಳಿ ಅಟವಾಡಲು ಹೋಗಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಅಲೂರಿನ ಮುತ್ತಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೇಸಿಗೆ ರಜೆ ನಿಮಿತ ಮಕ್ಕಳು ಈಜಾಡುವ ಸಲುವಾಗಿ ಕೆರೆಗೆ ಹೋಗಿದ್ದಾರೆ ಎನ್ನಲಾಗಿದೆ. ಮೃತ ಮಕ್ಕಳನ್ನು ಜೀವನ್‌, ಸಾತ್ವೀಕ್‌, ವಿಶ್ವ, ಪೃಥ್ವಿ ಮೃತ ಮಕ್ಕಳಾಗಿದ್ದಾರೆ. ಘಟನೆ ಸಂಬಂಧ ಅಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.