ಬೀದರ್ : ಮದುವೆಯಾಗುವುದಾಗಿ ನಂಬಿಸಿ, ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿ ಒಬ್ಬಳು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ಈ ವಿಚಾರವಾಗಿ ಪ್ರಭು ಚೌಹಾಣ್ ಇಂದು ಬೀದರ್ ನಲ್ಲಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಮಾಜಿ ಸಚಿವ ಭಗವಂತ್ ಕುಮಾರ್ ನನ್ನನ್ನು ರಾಜಕೀಯವಾಗಿ ಮುಗಿಸಲು ಈ ರೀತಿ ಪ್ಲಾನ್ ಮಾಡಿದ್ದಾರೆ ಎಂದು ಪ್ರಭು ಚೌಹಾಣ್ ಆರೋಪಿಸಿದರು.
ಪ್ರಭು ಚೌಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ವಿಚಾರವಾಗಿ ನನ್ನ ಕುಟುಂಬದ ಹೆಸರು ಕೆಡಿಸಲು ಒಂದು ಗ್ಯಾಂಗ್ ಕೆಲಸ ಮಾಡುತ್ತಿದೆ. ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮತ್ತು ಅವರ ಗ್ಯಾಂಗ್ ನನ್ನ ಕುಟುಂಬದ ಹೆಸರು ಕೆಡಿಸಲು ಪ್ರಯತ್ನಿಸುತ್ತಿದೆ. ಯಾವುದೇ ಕೆಲಸ ಮಾಡಿದರು ಅದಕ್ಕೆ ಆ ಗ್ಯಾಂಗ್ ಅಡ್ಡಿಪಡಿಸುತ್ತದೆ. 2014ರಿಂದಾರು ಆ ಗ್ಯಾಂಗ್ ನನ್ನ ವಿರುದ್ಧ ಕೆಲಸ ಮಾಡುತ್ತಿದೆ. ಆ ಯುವತಿಯನ್ನು ಕರೆದು ಇಂದು ದೂರು ಕೊಡಿಸಿದ್ದೆ ಆ ಗ್ಯಾಂಗ್. ಮಹಿಳಾ ಆಯೋಗಕ್ಕೆ ದೂರು ಕೊಡಿಸಿದ್ದೆ ಆ ಗ್ಯಾಂಗ್ ಎಂದು ಆರೋಪಿಸಿದರು.
ಯುವತಿಯ ಮೂಲಕ ನಮ್ಮ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಮಗ ಮತ್ತು ಸೊಸೆ ಹಾಗೂ ಅವರ ಸಹೋದರಿ ಶಿರಡಿಗೆ ಹೋಗಿದ್ದಾರೆ. ನನ್ನ ಮಗ ಯಾವುದೇ ಉಲ್ಟಾ ಪಲ್ಟಾ ಕೆಲಸ ಮಾಡಿಲ್ಲ. ನನ್ನ ಮಗನಿಗೆ ಬೇಕಾದರೆ ವೈದ್ಯಕೀಯ ತಪಾಸಣೆ ಮಾಡಿಸಲಿ. ನನ್ನ ಮಗ ನೆಪ ಮಾತ್ರ ಆದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್ ಮಾಡುತ್ತಿದ್ದಾರೆ ಇದು ಆ ಹುಡುಗಿಯ ವಿಚಾರ ಆಗಿರುವುದರಿಂದ ನಾನು ಸುಮ್ಮನಿದ್ದೆ ನಮ್ಮ ಕುಟುಂಬದ ವಿಚಾರಕ್ಕೆ ಬಂದರೆ ಸುಮ್ಮನಿರಬೇಕಾ ಹೇಳಿ? 10 ವರ್ಷದಿಂದ ಭಗವಂತ ಖೂಬಾ ನನಗೆ ಟಾರ್ಚರ್ ಕೊಡುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಶಾಸಕ ಪ್ರಭು ಚೌಹಾಣ್ ಆರೋಪಿಸಿದರು.