ಕಲಬುರ್ಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಆಯ್ಕೆಕೊಡಲು ಇದೀಗ ಮುಂದಾಗಿದೆ. ಬಿಪಿಎಲ್ ಫಲಾನುಭವಿಗಳಿಗೆ ಆದಷ್ಟು ಬೇಗ ಅಕ್ಕಿ ನೀಡುತ್ತೇವೆ. ಇಷ್ಟು ದಿನ ಡಿಬಿಟಿ ಮೂಲಕ ಹಣ ಹಾಕಲಾಗುತ್ತಿತ್ತು. ಇದೀಗ ಹಣ ಹಾಕುವ ಬದಲು ಜನರಿಗೆ ಅಕ್ಕಿ ಕೊಡುತ್ತೇವೆ ಎಂದರು.
ಬಡತನ ಗಿಂತ ಕೆಳಗಿರುವವರಿಗೆ ಮಾತ್ರ BPL ಕಾರ್ಡ್ ಮುಂದುವರಿಸುತ್ತೇವೆ. ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸೂಚಿಸಲಾಗಿದೆ. ಇನ್ನು ಹೊಸ ಬಿಪಿಎಲ್ ಕಾರ್ಡ್ ಗಾಗಿ ಸಾಕಷ್ಟು ಅರ್ಜಿಗಳು ಬಂದಿವೆ. ಸರ್ವರ್ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುತ್ತೇವೆ ಎಂದು ಕಲಬುರ್ಗಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







