Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವಿಕಲಚೇತನ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ಸಂಚಾರಿ ಭತ್ಯೆ’ ಮಂಜೂರು ಮಾಡಿ ಆದೇಶ.!
KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ಸಂಚಾರಿ ಭತ್ಯೆ’ ಮಂಜೂರು ಮಾಡಿ ಆದೇಶ.!

By kannadanewsnow5717/12/2024 5:20 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ವಿಕಲಚೇತನ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿಯಂತೆ `ಸಂಚಾರಿ ಭತ್ಯ’ ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಈ ಮೊದಲು ಚಾಲ್ತಿಯಲ್ಲಿದ್ದ ರಾಜ್ಯ ಸರ್ಕಾರದ ನೀತಿಯಂತೆ, ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 14.02.1979 ಮತ್ತು ದಿನಾಂಕ: 17.07.1979ರ ಸರ್ಕಾರಿ ಆದೇಶಗಳಲ್ಲಿ ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ಆದೇಶದ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಿ ಆದೇಶಗಳನ್ನು ಹೊರಡಿಸಲಾಗಿತ್ತು. ಸದರಿ ಸೌಲಭ್ಯವನ್ನು ನಿರ್ದಿಷ್ಟ ಬದಲಾವಣೆಗಳೊಂದಿಗೆ ಕಾಲದಿಂದ ಕಾಲಕ್ಕೆ ಮುಂದುವರೆಸಿಕೊಂಡು ಬರಲಾಗಿರುತ್ತದೆ. ಮುಂದುವರೆದು, 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ, ಮೇಲೆ (3)ರಲ್ಲಿ ಓದಲಾದ ದಿನಾಂಕ: 11.01.2019ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಸದರಿ ಆದೇಶದಲ್ಲಿನ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಲು ವಿಸ್ತ್ರತ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ದಿನಾಂಕ: 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗಿರುತ್ತದೆ. ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಪ್ರಯಾಣ ಭತ್ಯೆಯ ಮಂಜೂರಾತಿ ಕುರಿತಂತೆ ಪ್ರಸ್ತುತ ಚಾಲ್ತಿಯಲ್ಲಿರುವ ಪದ್ಧತಿಗೆ ಕೆಲವು ಬದಲಾವಣೆಗಳನ್ನು ಮಾಡಲು 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುತ್ತದೆ ಮತ್ತು ವಿಶೇಷ-ಚೇತನ ನೌಕರರುಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಮೂಲ ವೇತನದ 6% ರಷ್ಟು ಪ್ರಯಾಣ ಭತ್ಯೆಯ ಸೌಲಭ್ಯವನ್ನು ಮುಂದುವರೆಸಲು ಸಹ ಆಯೋಗವು ಶಿಫಾರಸ್ಸು ಮಾಡಿರುತ್ತದೆ.

ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಪ್ರಯಾಣ ಭತ್ಯೆ ಸೌಲಭ್ಯ ಮಂಜೂರು ಮಾಡುವುದನ್ನು ಕ್ರಮಬದ್ಧಗೊಳಿಸುವ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ 52 ಎಸ್‌ಆರ್‌ಪಿ 2024

ಬೆಂಗಳೂರು, ದಿನಾಂಕ 16ನೇ ಡಿಸೆಂಬರ್ 2024

ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಅವರ ಮೂಲ ವೇತನದ 6% ದರದಲ್ಲಿ ಯಾವುದೇ ಗರಿಷ್ಠ ಮಿತಿ ಇಲ್ಲದೇ 1ನೇ ಡಿಸೆಂಬರ್ 2024 ರಿಂದ ಜಾರಿಗೆ ಬರುವಂತೆ ಮಾಹೆಯಾನ ವಿಶೇಷ ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

2. ಈ ವಿಶೇಷ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಅಂಗವಿಕಲತೆ (ವಿಶೇಷ-ಚೇತನ) ಎಂದರೆ ಅದು ‘ವಿಶೇಷ ಚೇತನರ ಹಕ್ಕುಗಳ ಅಧಿನಿಯಮ, 2016’ ರಲ್ಲಿರುವಂತೆ ಇರತಕ್ಕದ್ದು ಮತ್ತು ಅದರಂತೆ ಅರ್ಥೈಸಿಕೊಳ್ಳತಕ್ಕದ್ದು. ಅದರಂತೆ, ಅಂಧ ಮತ್ತು ಚಲನವಲನ ವೈಕಲ್ಯತೆಯುಳ್ಳ ಹಾಗೂ ವಾಕ್ ಮತ್ತು ಶ್ರವಣ ವೈಕಲ್ಯತೆಯುಳ್ಳ ನೌಕರರನ್ನೂ ಒಳಗೊಂಡಂತೆ ರಾಜ್ಯ ಸರ್ಕಾರದ ಎಲ್ಲಾ ವಿಶೇಷ-ಚೇತನ ನೌಕರರುಗಳು ದಿನಾಂಕ: 01.12.2024 ರಿಂದ ಜಾರಿಗೆ ಬರುವಂತೆ ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.

3. ಈ ಭತ್ಯೆಯನ್ನು ಮಂಜೂರು ಮಾಡಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ನಿಬಂಧನೆಗಳು ಈ ಕೆಳಕಂಡಂತಿರತಕ್ಕದ್ದು:

1. 40% ರಷ್ಟು ಕನಿಷ್ಠ ಶಾಶ್ವತ ಅಂಗವಿಕಲತೆ ಹೊಂದಿರುವ ನೌಕರರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.

ii. ‘ವಿಶೇಷ ಚೇತನರ ಹಕ್ಕುಗಳ ಅಧಿನಿಯಮ, 2016’ ರ ಅವಕಾಶಗಳನ್ವಯ ನೇಮಕಗೊಂಡ ವಿಶೇಷ-ಚೇತನ ನೌಕರರುಗಳ ಪ್ರಕರಣಗಳಲ್ಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಒತ್ತಾಯಿಸತಕ್ಕದ್ದಲ್ಲ ಮತ್ತು ಈ ಸೌಲಭ್ಯವನ್ನು ಈ ಮೇಲೆ ತಿಳಿಸಿರುವ ಕನಿಷ್ಠ ಅಂಗವಿಕಲತೆಯ ಮಿತಿಗೊಳಪಟ್ಟು ಮಂಜೂರು ಮಾಡತಕ್ಕದ್ದು.

iii. ಯಾವುದೇ ವೈಜ್ಞಾನಿಕ ಉಪಕರಣಗಳ/ಸಾಧನಗಳ ಬಳಕೆಯಿಂದ ಸರಿಪಡಿಸಲಾಗದಂತಹ ಶಾಶ್ವತ ಅಂಗವಿಕಲತೆಯುಳ್ಳ ನೌಕರರಿಗೆ ಮಾತ್ರ ಈ ಸೌಲಭ್ಯವು ಸೀಮಿತವಾಗಿರುತ್ತದೆ.

iv. ವೈದ್ಯಕೀಯ ಉಪಕರಣಗಳ ಮುಖಾಂತರ ಸರಿಪಡಿಸಬಹುದಾದ ದೃಷ್ಟಿ ಮತ್ತು ಶ್ರವಣ ದೋಷ ಇರುವ ನೌಕರರುಗಳಿಗೆ ಈ ಸೌಲಭ್ಯವನ್ನು ವಿಸ್ತರಿಸಲು ಬರುವುದಿಲ್ಲ.

4. ‘ವಿಶೇಷ ಚೇತನರ ಹಕ್ಕುಗಳ ಅಧಿನಿಯಮ, 2016’ ನಿಯಮಗಳು ಜಾರಿಗೆ ಬರುವುದಕ್ಕೆ ಪೂರ್ವದಲ್ಲಿಯೇ ಖಾಯಂ ಸರ್ಕಾರದ ಸೇವೆಗೆ ನೇಮಕಗೊಂಡು ಪ್ರಸಕ್ತ ಚಾಲ್ತಿಯಲ್ಲಿರುವ ಆದೇಶ/ನಿಯಮಗಳ ಅವಕಾಶಗಳಡಿ ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಿರುವ ವಿಶೇಷ- ಚೇತನ ನೌಕರರ ಪ್ರಕರಣಗಳಲ್ಲಿ ಅವರು ಈಗಾಗಲೇ ಸಲ್ಲಿಸಿರುವ ಪ್ರಮಾಣ ಪತ್ರದ ಆಧಾರದ ಮೇಲೆ ಪರಿಷ್ಕೃತ ವಿಶೇಷ ಪ್ರಯಾಣ ಭತ್ಯೆಯನ್ನು ಮಂಜೂರು ಮಾಡತಕ್ಕದ್ದು. ಅವರುಗಳು ಹೊಸ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಒತ್ತಾಯಿಸತಕ್ಕದ್ದಲ್ಲ.

5. ರಾಜ್ಯ ಸರ್ಕಾರದ ಸೇವೆಗೆ ಸೇರಿದ ನಂತರ ಶಾಶ್ವತ ಅಂಗವಿಕಲತೆಯನ್ನು ಹೊಂದಿದ ನೌಕರರುಗಳ ಪ್ರಕರಣಗಳಲ್ಲಿ ಅವರುಗಳು, ಈ ಆದೇಶದ ಅನುಬಂಧದಲ್ಲಿ ಲಗತ್ತಿಸಿರುವ ನಮೂನೆಯಲ್ಲಿ ಸಲ್ಲಿಸುವ ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ಅವರ ಅರ್ಹತೆಯನ್ನು ಪ್ರಕರಣವಾರು ನಿರ್ಧರಿಸತಕ್ಕದ್ದು. ಮೇಲಿನ ಕಂಡಿಕೆ 3ರಲ್ಲಿ ತಿಳಿಸಿರುವ ಕನಿಷ್ಠ ಅಂಗವಿಕಲತೆಯ ನಿಬಂಧನೆಯು ಈ ಪ್ರಕರಣಗಳಿಗೂ ಅನ್ವಯಿಸುತ್ತದೆ.

6. ಈ ಆದೇಶಗಳನ್ವಯ ಪ್ರಯಾಣ ಭತ್ಯೆಯನ್ನು ಪಡೆಯುತ್ತಿರುವ ವಿಶೇಷ-ಚೇತನ ನೌಕರರುಗಳು, ಸಮಾನಾಂತರ ಉದ್ದೇಶಕ್ಕೆ ಇತರೆ ಸರ್ಕಾರಿ ನೌಕರರುಗಳು ಮಾಹೆಯಾನ ಪಡೆಯುತ್ತಿರುವ ನಗರ ಪರಿಹಾರ ಭತ್ಯೆ ಮತ್ತು ನಿಗದಿತ ಪ್ರಯಾಣ ಭತ್ಯೆ/ವಾಹನ ಭತ್ಯೆ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ. ಪರಂತು, ಅವರುಗಳು ಸರ್ಕಾರದ ಕೆಲಸದ ನಿಮಿತ್ತ ಕೈಗೊಳ್ಳುವ ಅಧಿಕೃತ ಪ್ರವಾಸಕ್ಕೆ ನಿಯಮಾನುಸಾರ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

BREAKING : `ವಿಕಲಚೇತನ ಸರ್ಕಾರಿ ನೌಕರರಿಗೆ' ಗುಡ್ ನ್ಯೂಸ್ : `ಸಂಚಾರಿ ಭತ್ಯೆ' ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ.! BREAKING: Good news for handicapped government employees : The state government has sanctioned Commuter Allowance and it is an important orde
Share. Facebook Twitter LinkedIn WhatsApp Email

Related Posts

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM2 Mins Read

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM1 Min Read
Recent News

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM
State News
KARNATAKA

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

By kannadanewsnow5708/06/2025 1:46 PM KARNATAKA 2 Mins Read

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗುವುದು ಸುಲಭವಲ್ಲ, ಆದರೆ ನಿಮ್ಮ ರೆಸ್ಯೂಮ್ ಪ್ರಭಾವಶಾಲಿಯಾಗಿದ್ದರೆ, ಸಂದರ್ಶನಕ್ಕೆ ಕರೆಗಳು ಬರಲು ಪ್ರಾರಂಭಿಸಬಹುದು. ನಿಮ್ಮ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

BREAKING : ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: RCB, KSCA, DNA ಕಂಪನಿ ವಿರುದ್ಧ ಮತ್ತೊಂದು ದೂರು ದಾಖಲು.!

08/06/2025 12:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.