Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಇದು ಕೇವಲ ಎಲೆಯಲ್ಲ, ಅದ್ಭುತ ಸಂಜೀವಿನಿ.! ‘300 ರೋಗ’ ನಿವಾರಿಸುವ ದಿವ್ಯೌಷಧಿ

02/02/2026 10:56 AM

ತ್ರಿಬಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್ : ಬೆಟ್ಟಿಂಗ್ ದಂಧೆಯಿಂದ ಮೈತುಂಬ ಸಾಲ, ಹಣ ಕೊಡದಿದ್ದಕ್ಕೆ ತಂದೆ, ತಾಯಿ, ತಂಗಿಯ ಹತ್ಯೆ!

02/02/2026 10:46 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಜಲಮಂಡಳಿ ಪೈಪ್ ಲೈನ್ ಸಂಪ್ ಗೆ ಬಿದ್ದು ಬಾಲಕ ಸಾವು.!

02/02/2026 10:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆದಾಯ ತೆರಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್ : 12 ಲಕ್ಷ ರೂ.ವರೆಗೆ ತೆರಿಗೆ ವಿನಾಯತಿ ಘೋಷಣೆ.!
INDIA

BREAKING : ಆದಾಯ ತೆರಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್ : 12 ಲಕ್ಷ ರೂ.ವರೆಗೆ ತೆರಿಗೆ ವಿನಾಯತಿ ಘೋಷಣೆ.!

By kannadanewsnow5701/02/2025 12:16 PM

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.

ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ಶೂರೆನ್ಸ್ ವಲಯಗಳಲ್ಲಿ ಎಫ್ ಡಿಐ ಹೆಚ್ಚಳ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲೂ ಇಂಡಿಯಾ ಪೋಸ್ಟ್ ಪೇಮೆಂಟ್ ಜಾರಿಗೆ ತಲಾಗುವುದು ಎಂದು ತಿಳಿಸಿದ್ದಾರೆ.

ವಿಮಾ ವಲಯದ ಎಫ್‌ಡಿಐ ಮಿತಿಯನ್ನು ಶೇ. 74 ರಿಂದ 100 ಕ್ಕೆ ಹೆಚ್ಚಿಸಲಾಗುವುದು. ಈ ವರ್ಧಿತ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೈಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುವುದು ಮತ್ತು ಸರಳಗೊಳಿಸಲಾಗುವುದು” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಗಳ ಬೆಲೆ ಇಳಿಕೆ ಮಾಡಲಾಗುವುದು, ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 1.5 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮೊಬೈಲ್, ಚರ್ಮದ ಉತ್ಪನ್ನಗಳು, ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಳ, ಎಲೆಕ್ಟ್ರಿಕ್ ಕಾರುಗಳ ಬೆಲೆಗಳನ್ನು ಇಳಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆದಾರರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಸಿಹಿಸುದ್ದಿ ನೀಡಿದ್ದು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.

BREAKING : ಆದಾಯ ತೆರಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್ : 12 ಲಕ್ಷ ರೂ.ವರೆಗೆ ತೆರಿಗೆ ವಿನಾಯತಿ ಘೋಷಣೆ.! BREAKING: Good news for income tax payers: Tax exemption of up to Rs 12 lakh announced
Share. Facebook Twitter LinkedIn WhatsApp Email

Related Posts

Shocking: ಕೆಲಸದ ಒತ್ತಡಕ್ಕೆ ಬಲಿಯಾದ ಟೆಕ್ಕಿ: ಪ್ರಾಣ ಹೋದ ಮೇಲೂ ನಿಲ್ಲದ ಆಫೀಸ್ ಮೆಸೇಜ್‌ಗಳ ಕಾಟ!

02/02/2026 10:31 AM1 Min Read

MCX ನಲ್ಲಿ ಚಿನ್ನದ ನಾಗಾಲೋಟಕ್ಕೆ ಬ್ರೇಕ್: ಜಾಗತಿಕ ಮಾರುಕಟ್ಟೆಯ ಎಫೆಕ್ಟ್, ಇಳಿಕೆಯತ್ತ ಬಂಗಾರದ ದರ!

02/02/2026 10:26 AM1 Min Read

ನಿಮ್ಮ ಹಳೆಯ ಸಿಮ್ ಕಾರ್ಡ್ ಎಸೆಯುವ ಮುನ್ನ ಓದಿ: ಸಿಮ್‌ನಿಂದ ಲಕ್ಷ ಲಕ್ಷ ಮೌಲ್ಯದ ಚಿನ್ನ ತೆಗೆದ ವ್ಯಕ್ತಿ!

02/02/2026 10:12 AM2 Mins Read
Recent News

ಗಮನಿಸಿ : ಇದು ಕೇವಲ ಎಲೆಯಲ್ಲ, ಅದ್ಭುತ ಸಂಜೀವಿನಿ.! ‘300 ರೋಗ’ ನಿವಾರಿಸುವ ದಿವ್ಯೌಷಧಿ

02/02/2026 10:56 AM

ತ್ರಿಬಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್ : ಬೆಟ್ಟಿಂಗ್ ದಂಧೆಯಿಂದ ಮೈತುಂಬ ಸಾಲ, ಹಣ ಕೊಡದಿದ್ದಕ್ಕೆ ತಂದೆ, ತಾಯಿ, ತಂಗಿಯ ಹತ್ಯೆ!

02/02/2026 10:46 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಜಲಮಂಡಳಿ ಪೈಪ್ ಲೈನ್ ಸಂಪ್ ಗೆ ಬಿದ್ದು ಬಾಲಕ ಸಾವು.!

02/02/2026 10:37 AM

Shocking: ಕೆಲಸದ ಒತ್ತಡಕ್ಕೆ ಬಲಿಯಾದ ಟೆಕ್ಕಿ: ಪ್ರಾಣ ಹೋದ ಮೇಲೂ ನಿಲ್ಲದ ಆಫೀಸ್ ಮೆಸೇಜ್‌ಗಳ ಕಾಟ!

02/02/2026 10:31 AM
State News
KARNATAKA

ಗಮನಿಸಿ : ಇದು ಕೇವಲ ಎಲೆಯಲ್ಲ, ಅದ್ಭುತ ಸಂಜೀವಿನಿ.! ‘300 ರೋಗ’ ನಿವಾರಿಸುವ ದಿವ್ಯೌಷಧಿ

By kannadanewsnow5702/02/2026 10:56 AM KARNATAKA 1 Min Read

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ನುಗ್ಗೆ ಸೊಪ್ಪು ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ನಿಯಂತ್ರಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಆಯುರ್ವೇದದಲ್ಲಿ…

ತ್ರಿಬಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್ : ಬೆಟ್ಟಿಂಗ್ ದಂಧೆಯಿಂದ ಮೈತುಂಬ ಸಾಲ, ಹಣ ಕೊಡದಿದ್ದಕ್ಕೆ ತಂದೆ, ತಾಯಿ, ತಂಗಿಯ ಹತ್ಯೆ!

02/02/2026 10:46 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಜಲಮಂಡಳಿ ಪೈಪ್ ಲೈನ್ ಸಂಪ್ ಗೆ ಬಿದ್ದು ಬಾಲಕ ಸಾವು.!

02/02/2026 10:37 AM

ALERT : ನಿಮ್ಮ `ಮೊಬೈಲ್’ಗೆ ಇಂತಹ ಮೆಸೇಜ್ ಗಳು ಬರುತ್ತಿವೆಯೇ? `SBI’ ನೀಡಿದೆ ಈ ಎಚ್ಚರಿಕೆ

02/02/2026 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.