ಬೆಂಗಳೂರು : ಕಳೆದ ಜೂನ್ 4 ರಂದು ಚೊಚ್ಚಲ IPL ಟ್ರೊಫಿ ಗೆದ್ದು ಬೀಗಿತ್ತು. ಈ ಹಿನ್ನೆಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಇದೆ ಕಾರಣಕ್ಕೆ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸಿದ ಇರಲು ನಿರ್ಧರಿಸಲಾಗಿತ್ತು.
ಅದೊಂದು ದುರ್ಘಟನೆಯ ಬಳಿಕ ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವ ಕ್ರಿಕೆಟ್ ಪಂದ್ಯವೂ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಗೂ ಶುಭ ಸುದ್ದಿಯೊಂದು ಸಿಕ್ಕಿದೆ. ಆದರೆ ಇದೀಗ ಬಿಸಿಸಿಐ ಬೆಂಗಳೂರಲ್ಲಿ 2026 ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ KSCA ಅಧ್ಯಕ್ಷ ವೆಂಕಟೇಶ್, ಬಿಸಿಸಿಐ ಕಾರ್ಯದರ್ಶಿಯನ್ನು ಭೇಟಿಯಾಗಿದ್ದು, ಅವರು 2026 ರ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಪಂದ್ಯಗಳು ಕೂಡ ಇನ್ನು ಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಆದಾಗ್ಯೂ ನಾವು ರಾಜ್ಯ ಸರ್ಕಾರದ ಬಳಿ ಈ ಬಗ್ಗೆ ಮಾತನಾಡಬೇಕಿದೆ. ಅವರ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ.








