ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, `ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.