ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.