ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಮರ್ಡರ್ ಆಗಿದ್ದು, ಟವೆಲ್ ನಿಂದ ಕತ್ತು ಬಿಗಿದು ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೇ ವರದಿಯಾಗಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ತಿಂಡ್ಲು ಬಳಿ ಈ ಒಂದು ಕೊಲೆ ನಡೆದಿದೆ.
ಟವೆಲ್ ನಿಂದ ಕತ್ತು ಬಿಗಿದು ರಾಮ್ ಕುಮಾರ್ (40) ಎನ್ನುವ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ. ಕಗ್ಗನೂರು ಚೆಕ್ ಪೋಸ್ಟ್ ನ ರಸ್ತೆ ಬದಿಯ ಪೊದೆಯಲ್ಲಿ ಶವ ಪತ್ತೆಯಾಗಿದೆ. ಹಗ್ಗದಿಂದ ಕೈಗಳನ್ನು ಕಟ್ಟಿ ಬಳಿಕ ಟವೆಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.