ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಕೇಂದ್ರ ಸರ್ಕಾರ GST ದರ ಕಡಿತಗೋಳಿಸಿತ್ತು. GST ದರ ಕಡಿತ ವಿಚಾರವಾಗಿ GST ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾ ಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಎಸ್ಟಿ ಕೇಂದ್ರ ಸರ್ಕಾರದವರು ಜಿಎಸ್ಟಿ ದರ ಕಡಿತವನ್ನು ರಾಜ್ಯಗಳಿಗೆ ಬಹಳ ಅನ್ಯಾಯವಾಗುವ ರೀತಿಯಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯಗಳು ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ ಅನುಭವಿಸಲಿವೆ. ಕರ್ನಾಟಕಕ್ಕೆ ರು.ನಷ್ಟು 15ರಿಂದ 16 ಸಾವಿರ ಕೋಟಿ ಆದಾಯ ಆಗುವ ವರಮಾನ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸದೆ ಹೋದರೆ ರಾಜ್ಯಗಳು ಮುಂದೆ ಸರ್ಕಾರ ಯನ್ನು ಕೇಂದ್ರವೇ ಎಂದು ನಷ್ಟವಾಗಲಿದೆ. ರಾಜ್ಯಗಳಿಗೆ ನಡೆಸುವುದೇ ಕಷ್ಟವಾಗಲಿದೆ. ಇದರ ಹೊಣೆ ಹೊರಬೇಕಾಗುತ್ತದೆ ಎಚ್ಚರಿಸಿದರು.
ವರಮಾನ ಅಥವಾ ಆದಾಯದ ಭದ್ರತೆ ಇಲ್ಲದೆ ಸ್ವಾಯತ್ತವಾಗಿ ಯಾವ ರಾಜ್ಯ ಸರ್ಕಾರವೂ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ಜಿಎಸ್ಟಿ ನಷ್ಟ ಪರಿಹಾರಕ್ಕಾಗಿ ವಿವಿಧಸೆಸ್ಗಳಿಂದಬರುವ ಆದಾಯವನ್ನು ರಾಜ್ಯಗಳಿಗೆ ನೀಡಬೇಕು. ಇದರಿಂದಕೇಂದ್ರ ಕ್ಕೂಹೊರೆಆಗುವುದಿಲ್ಲ ಎಂದು ರಾಜ್ಯಗಳು ಸಲಹೆ ಕೊಟ್ಟಿದ್ದೆವು. ಆದರೆ, ಕೇಂದ್ರ ಸರ್ಕಾರ ರಾಜ್ಯಗಳ ಬೇಡಿಕೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ರಾಜ್ಯಗಳ ಹಕ್ಕುಗಳನ್ನು ಸಂಪೂರ್ಣವಾಗಿ ಮುರಿದು ಏಕಪಕ್ಷೀಯವಾಗಿ ತೀರ್ಮಾನ ಮಾಡಿದೆ. ತನ್ಮೂಲಕ ರಾಜ್ಯಗಳ ಮೇಲೆ ಹಿಡಿತ ಸಾಧಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.