ಜಲಂಧರ್: ಆಮ್ ಆದ್ಮಿ ಪಕ್ಷವನ್ನು (AAP) ತೊರೆದು ಬಿಜೆಪಿ ಸೇರಿರುವ ರಾಜ್ಯಸಭಾ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ವಿರುದ್ಧ ಪಂಜಾಬ್ನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಶನಿವಾರ ಜಲಂಧರ್ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಎಎಪಿ ಕಾರ್ಯಕರ್ತರು, ಮನೆಯ ಗೋಡೆಗಳ ಮೇಲೆ “ಗದ್ದಾರ್” (ದ್ರೋಹಿ) ಎಂದು ಬರೆದು ಆಕ್ರೋಶ ಹೊರಹಾಕಿದ್ದಾರೆ.
ರಾಘವ್ ಚಡ್ಡಾ ಅವರ ನೇತೃತ್ವದಲ್ಲಿ ಹರ್ಭಜನ್ ಸಿಂಗ್ ಸೇರಿದಂತೆ ಏಳು ಮಂದಿ ಎಎಪಿ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ‘ಬಿಗ್ ಶಾಕ್’ನಿಂದ ಕಂಗೆಟ್ಟಿರುವ ಎಎಪಿ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ.
ಪ್ರತಿಭಟನಾಕಾರರು ಹರ್ಭಜನ್ ಸಿಂಗ್ ಅವರ ಮನೆಯ ಕಾಂಪೌಂಡ್ ಮತ್ತು ಗೇಟ್ ಮೇಲೆ ಕಪ್ಪು ಬಣ್ಣದಿಂದ “ಗದ್ದಾರ್” ಹಾಗೂ “ಪಂಜಾಬ್ ಕ ಗದ್ದಾರ್” ಎಂದು ಬರೆದಿದ್ದಾರೆ. ಭದ್ರತೆಗಾಗಿ ಪೊಲೀಸರು ಸ್ಥಳದಲ್ಲಿದ್ದರೂ ಸಹ, ಉದ್ರಿಕ್ತ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಗೋಡೆಗಳನ್ನು ವಿರೂಪಗೊಳಿಸಿದ್ದಾರೆ ಎಂದು ವರದಿಯಾಗಿದೆ.
#WATCH | Jalandhar, Punjab: AAP workers express their resentment against Rajya Sabha MP Harbhajan Singh as they wrote “Gaddar” on the walls of his residence in Jalandhar.
Raghav Chadha, Harbhajan Singh, along with 2/3rd MPs of AAP, merged with the BJP yesterday. pic.twitter.com/PGiFKwlt0I
— ANI (@ANI) April 25, 2026








