ಬೆಂಗಳೂರು : ಮೈಸೂರು ಜಿಲ್ಲೆಯ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.19 ಕ್ಕೆ ಮುಂದೂಡಿದೆ.
ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು. ಇಂದು ಅರ್ಜಿಯ ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.
ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಎಸ್ಐಟಿ ಮತ್ತು ಅರ್ಜಿದಾರರ ಪರ ವಾದ ಆಲಿಸಿ ಸೆ. 19 ಕ್ಕೆ ವಿಚಾರಣೆ ಮುಂದೂಡಿದೆ. ಈಗಾಗಲೇ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ರೇವಣ್ಣಗೆ ಜೈಲು ಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದಾರೆ.