Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICGS ಸಮುದ್ರ ಪ್ರತಾಪ್ ಕಾರ್ಯಾರಂಭಕ್ಕೆ ಪ್ರಧಾನಿ ಮೋದಿ ಶ್ಲಾಘನೆ : ಭಾರತದ ಮೊದಲ ದೇಶೀಯ ಮಾಲಿನ್ಯ ನಿಯಂತ್ರಣ ಹಡಗು ಬಗ್ಗೆ ತಿಳಿಯಿರಿ

07/01/2026 12:11 PM

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

07/01/2026 12:10 PM

SHOCKING : ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ 82 ವರ್ಷದ ಅಜ್ಜಿಯ ಹೊಟ್ಟೆಯಲ್ಲಿತ್ತು 40 ವರ್ಷದ ಮಗು : ಎಕ್ಸ್-ರೇ ನೋಡಿದ ವೈದ್ಯರೇ ಶಾಕ್.!

07/01/2026 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ : ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈ ಕೋರ್ಟ್!
KARNATAKA

BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ : ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈ ಕೋರ್ಟ್!

By kannadanewsnow0509/09/2024 4:43 PM

ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 Aಅಡಿ ಪ್ರಾಜೆಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ವೇಳೆ ಎಫ್ ಐ ಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯವಿದೆ, ಆದರೆ 17 ಎ ಅಡಿ ಅನುಮತಿಗೆ ಪ್ರಾಥಮಿಕ ತನಿಖೆ ಆಗಿರಬೇಕೆಂದಿಲ್ಲ. ವಿಚಾರಣೆ ತನಿಖೆಗೂ ಮುನ್ನ 17ಎ ಅನುಮತಿ ಬೇಕಲ್ಲವೇ? ಎಂದು ಅಡ್ವಕೇಟ್ ಜನರಲ್ ಗೆ ನ್ಯಾ. ಎಂ.ನಾಗಪ್ರಸನ್ನ ಪ್ರಶ್ನಿಸಿದ್ದಾರೆ.

ಯಾವ ಕೇಸ್ ನಲ್ಲಿ ಪ್ರಾಥಮಿಕ ತನಿಖೆ ಬೇಕೆಂಬುದನ್ನು ಸುಪ್ರೀಂ ಹೇಳಿದೆ.22 ವರ್ಷಕ್ಕಿಂತ ಹಳೆಯ ಕೆಸ್ ಇರುವುದರಿಂದ ಪ್ರಾಥಮಿಕ ತನಿಖೆ ನಡೆಯಬೇಕು. 17 ಅಡಿ ಕೇಂದ್ರ ಸರ್ಕಾರ ಮಾರ್ಗಸೂಚಿ ರೂಪಿಸಿದೆ. ಖಾಸಗಿ ದೂರುದಾರರನ್ನು ಪೊಲೀಸರಿಗೆ ಮೇಲ್ತರದಲ್ಲಿ ಇರಿಸಬಹುದು. ತಲೆಖಾಧಿಕಾರಿ ತನಗೆ ಬರುವ ಮಾಹಿತಿ ಪರಿಶೀಲಿಸುತ್ತಾನೆ. ಆದರೆ ಖಾಸಗಿ ದೂಹುದಾರರ ವಿಷಯದಲ್ಲಿ ಹೀಗಾಗುವುದಿಲ್ಲ ಎಂದಾಗ.ಈ ವೇಳೆ ಜಡ್ಜ್ ಇದು ಪೊಲೀಸ್ ಅಧಿಕಾರಿಯ ಮುಂದೆ ದೂರು ಕೊಟ್ಟಾಗ, ಖಾಸಗಿ ದೂರದಾರರಿಗೆ ಇದು ಅನ್ವಯವಾಗುವುದಿಲ್ಲ ಎಂದು ಜಡ್ಜ್ ತಿಳಿಸಿದರು.

ದೂರು ನೀಡಿದ ನಂತರ 15 ದಿನಗಳಿಂದ 6 ವಾರಗಳ ಕಾಲಾವಕಾಶವಿರುತ್ತದೆ. ಆದರೆ ಅದಕ್ಕೆ ಕಾಯದೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.ಈ ವೇಳೆ ಜಡ್ಜ್, ಎಲ್ಲಾ ನಾಗರೀಕರು ಎಲ್ಲರ ವಿರುದ್ಧ ದೂರು ನೀಡಿದರೆ ಸಮಸ್ಯೆ ಆಗುತ್ತದೆ. ಹೀಗಾಗಿ ಡಾ. ಅಶೋಕ ಕೇಸ್ ನಲ್ಲಿ ಮಾರ್ಗಸೂಚಿ ರೂಪಿಸಲಾಗಿದೆ ಎಂದರು. ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು.ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

ಸಿಎಂ ಕೈಗೊಂಡ ನಿರ್ಧಾರ ಶಿಫಾರಸಿನಲ್ಲಿ ಅಪರಾಧದ ಅಂಶವಿರಬೇಕು. 17A ಅಡಿ ಅನುಮತಿ ನೀಡುವಾಗ ಕೃತ್ಯ ಕರ್ತವ್ಯದ ಭಾಗವಾಗಿತ್ತೆ ನೋಡಬೇಕು. ನಾರಾ ಚಂದ್ರಬಾಬು ನಾಯ್ಡು ವರ್ಸಸ್ ಆಂಧ್ರಪ್ರದೇಶ ಕೇಸ್ ಹಾಗೂ ಬಿಎಸ್ ಯಡಿಯೂರಪ್ಪ ಪ್ರಕರಣ ಉಲ್ಲೇಖಿಸಿ ಎ.ಜಿ ವಾದ ಮಂಡಿಸಿದರು.ಯಡಿಯೂರಪ್ಪ ತೀರ್ಮಾನ ಕೈಗೊಂಡಿದ್ದರು. ಆದರೆ ಈ ಕೇಸಿನಲ್ಲಿ ಸಿದ್ದರಾಮಯ್ಯ ತೀರ್ಮಾನ ಕೈಗೊಂಡಿಲ್ಲ. ಸಿಎಂ ಕರ್ತವ್ಯದ ಭಾಗವಾಗಿ ಈ ಕೃತ್ಯ ನಡೆದಿಲ್ಲ. ಇದಕ್ಕೆ ಅವಕಾಶ ಕೊಟ್ಟರೆ ನಿತ್ಯ ಹಲವು ಖಾಸಗಿ ದೂರು ದಾಖಲಾಗಬಹುದು. ಸಕ್ಷಮ ಪ್ರಾಧಿಕಾರಿಯೇ ಇದನ್ನೆಲ್ಲ ವಿಚಾರಣೆ ನಡೆಸಿದರೆ, ಸಮಸ್ಯೆ ಆಗಲಿದೆ. ಪೊಲೀಸ್ ಅಧಿಕಾರಿಯ ಮೂಲಕವೇ 17 ಎ ಅಡಿ ಅನುಮತಿ ಪಡೆಯಬೇಕು.

ಸ್ನೇಹಮಯಿ ಕೃಷ್ಣ ಮನವಿಯಲ್ಲಿ ಸಿಬಿಐ ತನಿಖೆಯನ್ನು ಕೋರಲಾಗಿದೆ. ರಾಜ್ಯಪಾಲರ ಆದೇಶ 17 A ಅಡಿ ಇರಬೇಕೆ ಹೊರತು ಅವರ ಫೈಲ್ ನೋಟಿಂಗ ಗಳಿಗಲ್ಲ. ರಾಜ್ಯಪಾಲರ ಆದೇಶದಲ್ಲಿ ಇದಕ್ಕೆ ಕಾರಣಗಳು ಇರಬೇಕು. ರಾಜಪಾಲರು ಪರಿಶೀಲಿಸಿದ ಕಡತದಲ್ಲಲ್ಲ. 3 ವ್ಯಾಲ್ಯೂಮಗಳ ದಾಖಲೆಗಳನ್ನು ರಾಜ್ಯಪಾಲರ ಪರವಾಗಿ ಎಲ್ಲರೂ ನೀಡಿದ್ದಾರೆ. ಆದರೆ ಶೋಕಾಸ್ ನೋಟಿಸ್ ನೀಡುವ ಮುನ್ನ ಪ್ರಾಥಮಿಕ ವರದಿ ಇಲ್ಲ.

17 ಎ ಅಡಿ ರಾಜ್ಯಪಾಲರು ಪ್ರಾಥಮಿಕ ತನಿಖೆ ನಡೆಸುವಂತಿಲ್ಲ. ತನಿಖಾಧಿಕಾರಿಯಂತೆ ರಾಜಪಾಲರು ವರ್ತಿಸುವಂತಿಲ್ಲ. ಎಫ್ಐಆರ್ ದಾಖಲಿಸುವ ಮುನ್ನ 17 ಎ ಅನುಮತಿ ಪಡೆಯಬೇಕು ಕೋರ್ಟ್ ಸೂಚಿಸಿದ್ದರೆ ಎಫ್ಐಆರ್ ದಾಖಲಾಗುತ್ತಿತ್ತು ಇದನ್ನು ತಡೆಯಲು ದೂರುದಾರರಿಗೆ ಅನುಮತಿ ಪಡೆಯುವ ಅವಕಾಶವಿದೆ ಎಂದು ಜಡ್ಜ್ ತಿಳಿಸಿದರು.

ಇದೆ ವೇಳೆ ತಾವು ಸೆಪ್ಟೆಂಬರ್ 12ರಂದು ವಾದಿಸುವುದಾಗಿ ಅಭಿಷೇಕ್ ಮನು ಸಿಂಘವಿ ತಿಳಿಸಿದರು. ದೂರುದಾರರು ಕೆಸರೆ ಗ್ರಾಮನೇ ಇಲ್ಲ ಎಂದು ಆರೋಪಿಸಿದ್ದಾರೆ. ಅವರು ಗ್ರಾಮ ನುಂಗಿಬಿಟ್ಟಿದ್ದಾರೆ. ಗ್ರಾಮ ಎಲ್ಲಿದೆ ಹಾಗೂ ಸರ್ವೆ ನಂಬರ್ ಎಲ್ಲಿದೆ ನಾನು ತೋರಿಸುತ್ತೇನೆ ಎಂದು ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

07/01/2026 12:10 PM1 Min Read

BREAKING : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ

07/01/2026 11:48 AM1 Min Read

BIG NEWS : ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

07/01/2026 11:37 AM2 Mins Read
Recent News

ICGS ಸಮುದ್ರ ಪ್ರತಾಪ್ ಕಾರ್ಯಾರಂಭಕ್ಕೆ ಪ್ರಧಾನಿ ಮೋದಿ ಶ್ಲಾಘನೆ : ಭಾರತದ ಮೊದಲ ದೇಶೀಯ ಮಾಲಿನ್ಯ ನಿಯಂತ್ರಣ ಹಡಗು ಬಗ್ಗೆ ತಿಳಿಯಿರಿ

07/01/2026 12:11 PM

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

07/01/2026 12:10 PM

SHOCKING : ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ 82 ವರ್ಷದ ಅಜ್ಜಿಯ ಹೊಟ್ಟೆಯಲ್ಲಿತ್ತು 40 ವರ್ಷದ ಮಗು : ಎಕ್ಸ್-ರೇ ನೋಡಿದ ವೈದ್ಯರೇ ಶಾಕ್.!

07/01/2026 12:00 PM

10 ಹೆಣ್ಣು ಮಕ್ಕಳ ನಂತರ ಗಂಡು ಮಗುವಿನ ಜನನ: ‘ಇದು ದೈವ ಸಂಕಲ್ಪ’ ಎಂದ ತಂದೆ!

07/01/2026 11:54 AM
State News
KARNATAKA

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

By kannadanewsnow5707/01/2026 12:10 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ತಾಯಿಯ ಮೇಲಿನ ದ್ವೇಷಕ್ಕೆ ಆಕೆಯ 6 ವರ್ಷದ ಮುಗ್ಧ ಮಗಳನ್ನು…

BREAKING : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ

07/01/2026 11:48 AM

BIG NEWS : ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

07/01/2026 11:37 AM

SHOCKING : ತಾಯಿಯ ಮೇಲಿನ ದ್ವೇಷಕ್ಕೆ ಮಗಳ ಕತ್ತು ಹಿಸುಕಿ ಕೊಲೆ : ಬ್ಯಾಗ್ ನಲ್ಲಿ ಶವ ತುಂಬಿ ಚರಂಡಿಗೆ ಎಸೆದ ಪಾಪಿಗಳು!

07/01/2026 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.