ಮೈಸೂರು : ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅವಾಕಾಶ ನೀಡುವಂತೆ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮೀಕ್ಷೆ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ.
ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಇದೆ ವೇಳೆ ಹೈಕೋರ್ಟ್ ನಿರ್ದೇಶನ ನೀಡಿದ್ದು 1 ಲಕ್ಷ ರೂಪಾಯಿ ಬಾಂಡ್ ನೀಡಲು ಪ್ರತಿಭಟನೆಯ ಆಯೋಜಕರಿಗೆ ನಿರ್ದೇಶನ ನೀಡಲಾಗಿದೆ.ಮಧ್ಯಾಹ್ನ 3:30ರ ಬಳಿಕ ಪ್ರತಿಭಟನೆಗೆ ಅವಕಾಶ ನೀಡಲು ಸೂಚನೆ ನೀಡಿ, ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ದೇವದಾಸ್ ಅವರಿದ್ದ ಪೀಠ ಅವರಿದ್ದ ಪೀಠ ಸೂಚನೆ ನೀಡಿದೆ.
ಮೈಸೂರಿ ಫುಟ್ಬಾಲ್ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರತಿಭಟನೆ ಶಾಂತಿಯುತವಾಗಿರಬೇಕು. ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಕಸ್ಮಾತ್ ಅಹಿತಕರ ಘಟನೆ ನಡೆದರೆ ಅರ್ಜಿದಾರರೇ ಹೊಣೆ ಎಂದು ಹೈಕೋರ್ಟ್ ಇದೆ ವೇಳೆ ತಿಳಿಸಿತು.
ಮೈಸೂರಲ್ಲಿ ನಿಷೇದಾಜ್ಞೆ ಜಾರಿಮಾಡಲಾಗಿದ್ದು, ಆ ನಡುವೆಯೂ ಪ್ರತಿಭಟನೆ, ರ್ಯಾಲಿಗೆ ಸಿದ್ಧತೆಗಳು ನಡೆದಿವೆ. ಉದಯಗಿರಿ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಪರ- ವಿರೋಧ ಪ್ರತಿಭಟನೆ ರ್ಯಾಲಿಗೆ ಸಂಘಟನೆಗಳು ತಯಾರಿ ನಡೆಸಿಕೊಂಡಿವೆ.ಆದ್ರೆ ಪೊಲೀಸರು ಯಾವುದೇ ಸಂಘಟನೆಗೂ ಅನುಮತಿ ನೀಡಿಲ್ಲ. ಹೀಗಾಗಿ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾತ್ರಿ 12 ಗಂಟೆಯಿಂದ ಮರುದಿನ ರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಈ ಬಗ್ಗೆ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದರು.
ಮತ್ತೊಂದೆಡೆ ಈಗಾಗಲೇ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿ ಜಾಥಾ ಹಮ್ಮಿಕೊಂಡಿದ್ದು ಜಾಥಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಲಿದ್ದಾರೆ. ಇತ್ತ ಇದನ್ನು ವಿರೋಧಿಸಿ ಅದೇ ಸಮಯದಲ್ಲಿ ದಲಿತ ಮಹಾಸಭಾ ಮೌನ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲು ಮುಂದಾಗಿದೆ.