ಬೆಂಗಳೂರು : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ ಮಲ್ಯ ಅರ್ಜಿ ಸಲ್ಲಿಸಿದ್ದು, ವಿಜಯ ಮಲ್ಯ ಪರ ಹಿರಿಯ ವಕೀಲ ಸಜನ್ ಪೂವಯ್ಯ ಹೈಕೋರ್ ನಲ್ಲಿ ಇಂದು ವಾದ ಮಂಡಿಸಿದರು. ಈ ವೇಳೆ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಆರ್ ದೇವದಾಸ್ ಅವರು ಬ್ಯಾಂಕ್ಗಳಿಗೆ ಹಾಗೂ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ
ವಿಜಯ್ ಮಲ್ಯ ಪರ ಹಿರಿಯ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿ 6200 ಕೋಟಿ ಸಾಲ ಕೊಡಬೇಕಿತ್ತು. 14,000 ಕೋಟಿ ವಸೂಲಿಯಾಗಿದೆ ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ.ಸಾಲ ವಸೂಲಾತಿ ಅಧಿಕಾರಿ10,200 ಕೋಟಿ ವಸೂಲಾಗಿದೆ ಎಂದಿದ್ದಾರೆ.
ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಲು ಮನವಿ ಮಾಡಿದರು. ಈ ವೇಳೆ ಜಡ್ಜ್ ಬ್ಯಾಂಕಗಳಿಗೂ ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾ.ಆರ್ ದೇವದಾಸ್ ಅವರಿಂದ ಹೈಕೋರ್ಟ್ ಪೀಠ ಇದೀಗ ಆದೇಶ ಹೊರಡಿಸಿದೆ.