ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ.
ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.