ಹಾಸನ : ಧಾರಾಕಾರ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿರುವ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.
ಧಾರಾಕಾರ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಘಾಟ್ ರೈಲು ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರು-ಮುರುಡೇಶ್ವರ ರೈಲು ಸಂಚಾರವೂ ಸ್ಥಗಿತಗೊಂಡಿದೆ. ಅರೆಬಟ್ಟ,ಯಡೆಕುಮಾರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿದಿದೆ. ಹಳಿ ಮೇಲೆ ಬಿದ್ದ ಗುಡ್ಡವನ್ನು ರೈಲ್ವೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿ ನೀರು,ಕಾಫಿ, ಟೀ ವ್ಯವಸ್ಥೆ ಮಾಡಿದ್ದಾರೆ.