ವಿಜಯನಗರ : ವಿಜಯನಗರದಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿಗೆ ಲಾರಿ ಒಂದು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಕೆಪಿಟಿಸಿಎಲ್ ಕಚೇರಿಯ ಮುಂದೆ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದಂತಹ ಲಾರಿ ಎಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.ಈ ಒಂದು ಅಪಘಾತದಲ್ಲಿ ಸ್ಥಳದಲ್ಲೇ ದಂಪತಿಗಳಿಬ್ಬರು ಸಾವನಪ್ಪಿದ್ದಾರೆ. ಚಾಲಕ ಮುತ್ತಪ್ಪ ಪೂಜಾರ್ (35) ಪತ್ನಿ ರೇಣುಕಾ (30) ಮೃತರು ಎಂದು ತಿಳಿದುಬಂದಿದೆ. ಇನ್ನು ಮಕ್ಕಳದಂತಹ ಅನುಶ್ರೀ (9) ರೂಪಶ್ರೀ (6) ಮತ್ತು ಖುಷಿ (4) ಗಂಭೀರವಾದ ಗಾಯಗಳಾಗಿವೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ಚಟ್ನಿಹಾಲು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೊಹರಂ ಹಬ್ಬದ ಪ್ರಯುಕ್ತ ಚಟ್ನಿಹಾಳು ಗ್ರಾಮಕ್ಕೆ ಹೊರಟಿದ್ದರು. ಅಪಘಾತ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಲಾರಿ ಸುಮಾರು ಅರ್ಧ ಕಿ.ಮೀ ಅಷ್ಟು ಕಾರನ್ನು ದೂರ ತಳಿಕೊಂಡು ಹೋಗಿದೆ. ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.