ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವನಪ್ಪಿದ್ದಾರೆ. ರಾಜಕುಮಾರ್ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಿನ್ನೆ ಸಂಜೆ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರರನ್ನು ನಿವೃತ್ತ ಸಿ ಎ ಆರ್ ಸಿಬ್ಬಂದಿ ಹನುಮಂತರಾಯಪ್ಪ (71) ಎಂದು ತಿಳಿದುಬಂದಿದೆ. ಹನುಮಂತರಾಯಪ್ಪ ಬಾಗಲಕುಂಟೆಯಿಂದ ಕೆಲಸದ ನಿಮಿತ್ಯ ರಾಜಾಜಿನಗರಕ್ಕೆ ಬಂದಿದ್ದರು. ನಿನ್ನೆ ಸಂಜೆ 4:30ಗೆ ಹನುಮಂತರಾಯಪ್ಪ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು.
ಈ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕೆಳಗೆ ಸಿಲುಕಿ ಬಿದ್ದಿದ್ದಾರೆ. ಗಾಯಗೊಂಡಿದ್ದ ಹನುಮಂತ ರಾಯಪ್ಪನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಹನುಮಂತ ರಾಯಪ್ಪ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.