ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್ವೆಲ್ ನಡುವೆ ನಿನ್ನೆ ತಡರಾತ್ರಿ ನಡೆದಿದೆ.
ಮೃತ ವೈದ್ಯರನ್ನು ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ.
ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.