ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಕೆರೆಗೆ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕನೆಕೊಪ್ಪ ಹೊಸೂರು ಬಳಿ ನಡೆದಿದೆ.
ಅಪಘಾತದಲ್ಲಿ ಪುನೆದಹಳ್ಳಿ ಗ್ರಾಮದ ನವೀನ್ (21) ರಾಮಚಂದ್ರ (37) ಸಾವನ್ನಪ್ಪಿದ್ದಾರೆ. ಇನ್ನು ರುದ್ರೇಶ್ (26) ಮಂಜುನಾಥ್ (21) ಪ್ರಾಣಾಪಯದಿಂದ ಪಾರಾಗಿದ್ದಾರೆ. ಶಿಕಾರಿಪುರ ಆನವಟ್ಟಿ ಕಡೆಗೆ ಇಕೋ ಕಾರಿನಲ್ಲಿ ಹೊರಟಿದ್ದರು.
ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶವಗಳನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಆನವಟ್ಟಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








