ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊರ್ತಿ ಕೋಲಾರ ಸೇತುವೆ ಬಳಿ ನಡೆದಿದೆ.
ಮೃತರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇನ್ನೋರ್ವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.