ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಭಗ್ನ ಪ್ರೇಮಿ ಬಾಡಿ ಬಿಲ್ಡರ್ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಹಾಗೂ ಬಾಡಿ ಬಿಲ್ಡಿಂಗ್ ಮಾಡಿಕೊಂಡಿದ್ದರು.
ಕಿರಣ್ ಕಳೆದ 3 ವರ್ಷಗಳಿಂದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ವ್ಯಾಲೆಂಟೆನ್ಸ್ ಡೇಗೆ ಗಿಫ್ಟ್ ಕೊಡಲು ಪ್ಲ್ಯಾನ್ ಕೂಡ ಮಾಡಿದ್ದ. ಆದರೆ ಯುವತಿಗೆ ಬೇರೊಬ್ಬ ಯುವಕನ ಜೊತೆಗೆ ಮದುವೆ ಫಿಕ್ಸ್ ಆಗಿತ್ತು. ಯುವತಿ ಲಗ್ನ ಪತ್ರಿಕೆ ಮತ್ತು ಹೊಸ ಸೀರೆ ತೋರಿಸಿದ್ದ ಯುವತಿ. ಇದರಿಂದ ಮನನೊಂದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ.








