ವಿಜಯಪುರ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ 6 ಜನರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸೇರಿ ಆರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹತ್ಯಾಕಾಂಡ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇಂದು ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮೇ 29ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು . ಚಂದ್ರಕಾಂತ ನಿರಾಳೆ ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ, ನಿರಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬೀರ್ ಅತ್ತಾರ್ ಕೊಲೆಯಾಗಿದ್ದು ಜೂನ್ 1 ರಂದು ಕಲ್ಲನಗೌಡ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿತ್ತು.
ತನಿಖೆಯ ವೇಳೆ ಇನ್ನಷ್ಟು ಆರೋಪಿಗಳ ಪಾತ್ರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ಮತ್ತೆ ಆರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಸದ್ಯ ಹೆಚ್ಚಿನ ವಿವರಣೆಗಾಗಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಪೋಲಿಸರು ಮತ್ತೆ ಹುಡುಕಾಟ ಮುಂದುವರೆಸಿದ್ದಾರೆ.








