ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಠಾಣೆಯ ಸಮೀಪದಲ್ಲಿಯೇ ಕೊಡಲಿ ಇಂದ ಕೊಚ್ಚಿ ಪ್ರತಿಯೊಬ್ಬ ತನ್ನ ಪತ್ನಿಯನ್ನು ಬರ್ಬರ ಹತ್ಯೆಗೈದಿದ್ದಾನೆ. ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆಯ ಸಮೀಪ ಈ ಒಂದು ಘಟನೆ ನಡೆದಿದೆ. ಕೊಡಲಿಯಿಂದ ಕೊಚ್ಚಿ ಪತ್ನಿ ವಿದ್ಯಾಳನ್ನು ಪತಿ ಗಿರೀಶ್ ಕೊಲೆ ಮಾಡಿದ್ದಾನೆ.
ಅನ್ಯ ಜಾತಿಯ ಯುವಕನೊಂದಿಗೆ ಪತ್ನಿ ವಿದ್ಯಾ ಓಡಿ ಹೋಗಿದ್ದಳು. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿಯನ್ನು ಗಿರೀಶ್ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ರಕ್ತ ಸ್ರಾವದಿಂದ ಬಿದ್ದಿದ್ದ ವಿದ್ಯಾಳನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾಳೆ.ಸದ್ಯ ಪೋಲೀಸರು ಕೊಲೆ ಆರೋಪಿಗೆ ಗಿರೀಶ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.