ಕೋಲಾರ : ಕೋಲಾರದಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಕೊಲೆಯಾಗಿದ್ದು, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ ಚಾಕುವಿನಿಂದ ಇರಿದು ಸುಜಾತ (27) ಎನ್ನುವ ಪ್ರಿಯತಮೆಯನ್ನು ಪ್ರಿಯತಮ ಚಿರಂಜೀವಿ ಕೊಲೆ ಮಾಡಿದ್ದಾನೆ.
ಕೊಲೆಯಾದ ಸುಜಾತ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದಿ ನಿವಾಸಿ ಎಂದು ತಿಳಿದುಬಂದಿದೆ. ಯುವತಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇನ್ನು ಆರೋಪಿ ಚಿರಂಜೀವಿ ಹೊಸಪೇಟೆ ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ಎಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








