ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏರೋನೊಟಿಕಲ್ ಇಂಜಿನಿಯರ್ ನಂದಿನಿ ಎನ್ನುವವರು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಫಾರ್ಚುನರ್ ಮತ್ತು ದ್ವಿಚಕ್ರ ವಾಹನದ ನಡುವೆ ಈ ಒಂದು ಅಪಘಾತ ಸಂಭವಿಸಿದೆ. ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯಾಗಿದ್ದ ನಂದಿನಿ ಇದೀಗ ಸಾವನಪ್ಪಿದ್ದಾರೆ.
ಮೂಲತಃ ನೆಲಮಂಗಲ ತಾಲೂಕಿನ ಹುಸ್ಕೂರು ನಿವಾಸಿಯಾಗಿದ್ದ ನಂದಿನಿ ಕಳೆದ ಆರು ತಿಂಗಳಿನಿಂದ ಬಾಗಲೂರಿನ ಪಿಜಿಯಲ್ಲಿ ನಂದಿನಿ ವಾಸವಿದ್ದರು. ನಿನ್ನೆ ಸಂಜೆ ಕೆಲಸ ಮುಗಿಸಿ ಪಿಜಿಗೆ ತೆರಳುವಾಗ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ನಂದಿನಿ ತಲೆ ಮತ್ತು ಕಾಲಿಗೆ ತೀವ್ರವಾಗಿ ಗಾಯಗಳಾಗಿದ್ದವು.
ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತೀವ್ರ ರಕ್ತ ಸ್ರಾವದಿಂದ ನಂದಿನಿ ಸಾವನ್ನಪ್ಪಿದ್ದಾರೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿ ಕೊಂಡುಕೊಂಡಿರುವ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.