ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು ಗಣೇಶ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.
ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ. ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.