ಬೆಂಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಗಲಕುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಚೂರು ಮೂಲದ ವಿಜಯಲಕ್ಷ್ಮಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಜಯಲಕ್ಷ್ಮಿ ಸಹೋದರಿ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಮಾಲ್ ನಲ್ಲಿ ವಿಜಯಲಕ್ಷ್ಮಿ ಪತಿ ಕೆಲಸ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.