ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಕೊಲೆಯಾಗಿದ್ದು, ತೋಟದ ಮನೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಗೃಹಿಣಿಯ ಭೀಕರ ಹತ್ಯೆಗೈದಿರುವ ಘಟನೆ ಚಾಮರಾಜನಗರ ತಾಲೂಕಿನ ಡೊಳ್ಳಿಪುರ ಗ್ರಾಮದ ಬಳಿ ನಡೆದಿದೆ.
ತೋಟದ ಮನೆಯಲ್ಲಿ ಪತಿ, ಅತ್ತೆಯ ಜೊತೆಗೆ ವಾಸವಿದ್ದ ಶುಭ (38) ಭೀಕರವಾದ ಕೊಲೆಯಾಗಿರುವ ಗೃಹಿಣಿ ಎಂದು ತಿಳಿದುಬಂದಿದೆ. ತೋಟದ ಮನೆಯ ಸಮೀಪ ಶುಭ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಚ್ಚಿನಿಂದ ಮುಖ ಮತ್ತು ತಲೆಗೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಸೊಸೆಯನ್ನು ಯಾರೋ ಕೊಲೆಗೈದಿದ್ದಾರೆ ಎಂದು ಪೊಲೀಸರಿಗೆ ಅತ್ತೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸದ್ಯ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.