ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರವಾದ ಘಟನೆ ಸಂಭವಿಸಿದ್ದು ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆರೋಗ್ಯ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (KMCRI) ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ರೋಗಿಯನ್ನು ನೇಕಾರ ನಗರದ ಆದರ್ಶ ಗೋಂದಕರ್ (18) ಎಂದು ತಿಳಿದುಬಂದಿದೆ. ಆದರ್ಶ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ರಕ್ತದ ಪ್ಲೇಬ್ಲೆಟ್ ಸಂಖ್ಯೆ ಸಹ ಕಡಿಮೆಯಾಗಿತ್ತು. ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕೆಎಂಸಿಆರ್ಐ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ತಿಳಿಸಿದರು.
ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ 4.30ಕ್ಕೆ ವಾರ್ಡ್ನಲ್ಲಿನ ಸಿಬ್ಬಂದಿಯ ಕಣ್ಣಪ್ಪಿಸಿ ಅವರು ಆಸ್ಪತ್ರೆಯ ಮುಖ್ಯ ಕಟ್ಟಡದ 303ನೇ ವಾರ್ಡ್ನ ಕಿಟಕಿಯಿಂದ ಜಿಗಿದಿದ್ದಾರೆ. ಅವರ ತಲೆ ಮತ್ತು ಯಕೃತ್ತಿಗೆ ಹಾನಿಯಾಗಿತ್ತು. ಕೂಡಲೇ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ ಎಂದರು.ಮರಣೋತ್ತರ ಪರೀಕ್ಷೆ ನಂತರ ವರದಿ ನೀಡುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಲಾಗಿದೆ.