ಹೈದ್ರಾಬಾದ್ : ಕೇವಲ ಅಸ್ತಿಗಾಗಿ ದುಷ್ಟ ಮೊಮ್ಮಗನೊಬ್ಬ ತನ್ನ ತಾತನನ್ನೆ ಚಾಕುವಿನಿಂದ ಇರಿದು ಸುಮಾರು 70ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೈದರಾಬಾದ್ನ ಪಂಜಗುಟ್ಟದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ವೆಲ್ಜನ್ ಗ್ರೂಪ್ ಚೇರ್ಮನ್ ಜನಾರ್ಧನ್ ರಾವ್ (86) ಎಂದು ತಿಳಿದುಬಂದಿದೆ.
ಕೊಲೆ ಮಾಡಿದ ಮೊಮ್ಮಗನನ್ನು ಕೀರ್ತಿತೇಜ್ (29) ಎಂದು ತಿಳಿದುಬಂದಿದೆ. ಕಳೆದ ಫೆ.6ರಂದು ಆರೋಪಿ ಕೀರ್ತಿ ತೇಜ್ ತನ್ನ ತಾತ ಜನಾರ್ಧನ್ ರಾವ್ಗೆ ಬರೋಬ್ಬರಿ 73 ಬಾರಿ ಚಾಕುವಿನಿಂದ ಇರಿದಿದ್ದ. ಹೈದರಾಬಾದ್ನ ಪಂಜಗುಟ್ಟದಲ್ಲಿ ಈ ಘಟನೆ ನಡೆದಿತ್ತು. ತೀವ್ರ ರಕ್ತಸ್ರಾವವಾಗಿ ಜನಾರ್ಧನ್ ರಾವ್ ಅವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಘಟನೆ ವೇಳೆ ಅಡ್ಡಬಂದ ತಾಯಿಗೂ ಆರೋಪಿ ಚಾಕುವಿನಿಂದ ಇರಿದಿದ್ದು, ಅವರಿಗೂ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.ನಗರದ ಇನ್ನೊಂದು ಪ್ರದೇಶದಲ್ಲಿ ವಾಸವಾಗಿರುವ ತೇಜ ಹಾಗೂ ಆತನ ತಾಯಿ ಗುರುವಾರ ಸೋಮಾಜಿಗುಡದಲ್ಲಿರುವ ರಾವ್ ಅವರ ಮನೆಗೆ ಭೇಟಿ ನೀಡಿದ್ದರು. ತಾಯಿ ಕಾಫಿ ಮಾಡಲು ಹೋದಾಗ ತೇಜಾ ಹಾಗೂ ರಾವ್ ನಡುವೆ ಆಸ್ತಿ ಹಂಚಿಕೆ ವಿಚಾರವಾಗಿ ಜಗಳ ನಡೆದಿದೆ.
ಮೃತ ವ್ಯಕ್ತಿಗೆ 70ಕ್ಕೂ ಹೆಚ್ಚು ಇರಿಯಲಾಗಿದೆ ಎನ್ನುವ ವರದಿಗಳ ಬಗ್ಗೆ ಕೇಳಿದಾಗ, ಹಲವು ಇರಿದ ಗಾಯಗಳಾಗಿರುವುದು ನಿಜ. ಆದರೆ ಮರಣೋತ್ತರ ಪರೀಕ್ಷೆ ವರದಿಯ ಆಧಾರದ ಮೇಲೆ ನಿಖರವಾದ ಮಾಹಿತಿ ನೀಡಲಾಗುವುದು ಎಂದರು. ಆರೋಪಿಯು ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಮುಗಿಸಿ ಅಮೆರಿಕದಿಂದ ಹೈದರಾಬಾದ್ಗೆ ಮರಳಿದ್ದ. ಈ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.