ಬೆಂಗಳೂರು : ಬೆಂಗಳೂರಿನಲ್ಲಿ ಕೃಷರ್ ಮಾಲಿಕನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು ಶಾಸಕ ಭೈರತಿ ಬಸವರಾಜ್ ಸಹಾಯಕ ಅಳಿಯ ಹಾಗೂ ಕೃಷರ್ ಮಾಲೀಕರಾದಂತಹ ಲೋಕೇಶ್ ಎನ್ನುವವರ ಮನೆಯ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಸುಮರು 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ಹೊಸೂರು ನಿವಾಸಿ ಲೋಕೇಶ್ ಮನೆಯ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಇತ್ತೀಚಿಗೆ ತಮಿಳುನಾಡಿನ ಹೊಸೂರು ಚೆಕ್ ಪೋಸ್ಟ್ ನಲ್ಲಿ ಕ್ರಷರ್ ಮಾಲೀಕರಾಗಿರುವ ಲೋಕೇಶ್ ಅವರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿಗಳ ಜೊತೆಗೆ ಸಿಗಿಬಿದ್ದಿದ್ದರು ಎಂದು ತಿಳಿದುಬಂದಿದೆ. ಈ ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಅವರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಲ್ಲದೆ ಇವರು ಬೆಂಗಳೂರಿನಲ್ಲಿ ಕೆಆರ್ ಪುರಂ ಬಿಜೆಪಿ ಶಾಸಕರಾಗಿರುವ ಭೈರತಿ ಬಸವರಾಜ್ ಆಪ್ತ ಸಹಾಯಕ ಮಂಜುನಾಥ ಅವರ ಅಳಿಯ ಎಂದು ಹೇಳಲಾಗುತ್ತಿದೆ. ಇದೀಗ ಅವರ ಮನೆ ಮೇಲೆ ಐಡಿ ಲಾಕೆ ಡಿಡಿ ವಿಷ್ಣು ಪ್ರಸಾದ್ ಸಿರಿಗಂತೆ ಆರಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Share.
Exit mobile version