Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

BIG NEWS : ನಾಳೆ 11 ಗಂಟೆಗೆ ಹೈಕಮಾಂಡ್ ಜೊತೆ ಸಭೆಯಲ್ಲಿ ಭಾಗಿಯಾಗ್ತೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!
KARNATAKA

BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

By ಸುರೇಶ್‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿಢೀರ್ ಬಿರುಸಿನ ಬೆಳವಣಿಗೆಗಳು ಆರಂಭವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬುಲಾವ್ ನೀಡಿದೆ. ಈ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಸುಳಿವು ನೀಡಿರುವುದು ಕೈ ಪಾಳಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 7 ಗಂಟೆಗೆ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬಂದ ಹಿನ್ನೆಲೆಯಲ್ಲಿ ಸಿಎಂ ತಮ್ಮ ಮುಂಚಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ಹೊರಡಲು ಸಿದ್ಧತೆ ನಡೆಸಿದ್ದಾರೆ. ಸಚಿವ ಸಂಪುಟ ಪುನಾರಚನೆ, ನಿಗಮ ಮಂಡಳಿ ನೇಮಕಾತಿ ಅಥವಾ ರಾಜ್ಯ ಸರ್ಕಾರದ ಪ್ರಮುಖ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಲು ಹೈಕಮಾಂಡ್ ಈ ಬುಲಾವ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ‘ದೆಹಲಿ’ ಬಾಂಬ್!

ಸಿಎಂ ದೆಹಲಿ ಪ್ರವಾಸದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ನನ್ನನ್ನು ಕರೆದರೆ ನಾನು ಸಹ ದೆಹಲಿಗೆ ಹೋಗುತ್ತೇನೆ” ಎಂದು ಹೇಳುವ ಮೂಲಕ ಹೊಸ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ಹೈಕಮಾಂಡ್‌ನಿಂದ ತಮಗೆ ಅಧಿಕೃತವಾಗಿ ಇನ್ನು ಯಾವುದೇ ಕರೆ ಬರದಿದ್ದರೂ, ಇಂದೇ ದೆಹಲಿಗೆ ಹೋಗಲು ಡಿಕೆಶಿ ಆಂತರಿಕವಾಗಿ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ನಾಯಕರ ಭೇಟಿಗೆ ಪ್ಲಾನ್

ಸದ್ಯದ ಮಾಹಿತಿ ಪ್ರಕಾರ, ಹೈಕಮಾಂಡ್‌ನಿಂದ ನೇರ ಆಹ್ವಾನ ಇಲ್ಲದಿದ್ದರೂ ಸಹ ಡಿ.ಕೆ. ಶಿವಕುಮಾರ್ ಅವರು ಇಂದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಯಲ್ಲೇ ಅಥವಾ ಅವರ ಬೆನ್ನಲ್ಲೇ ದೆಹಲಿಗೆ ಹಾರುವ ಸಾಧ್ಯತೆ ದಟ್ಟವಾಗಿದೆ. ಅಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಮಾನಗಳ ಕುರಿತು ಚರ್ಚಿಸಲು ಅವರು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಇಬ್ಬರೂ ಏಕಕಾಲಕ್ಕೆ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ಎಡೆಮಾಡಿಕೊಟ್ಟಿದೆ. ಸರ್ಕಾರದ ಆಡಳಿತದ ಮೇಲಿನ ಹಿಡಿತ, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಈ ಜಂಟಿ ಅಥವಾ ಸರಣಿ ಭೇಟಿಗಳು ಅತ್ಯಂತ ಮಹತ್ವ ಪಡೆದುಕೊಂಡಿವೆ.

Share. Facebook Twitter LinkedIn WhatsApp Email

Related Posts

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

2 Mins Read

BIG NEWS : ನಾಳೆ 11 ಗಂಟೆಗೆ ಹೈಕಮಾಂಡ್ ಜೊತೆ ಸಭೆಯಲ್ಲಿ ಭಾಗಿಯಾಗ್ತೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

1 Min Read

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಫೋನ್ ನ ಈ ಸೂಕ್ಷ್ಮ ಭಾಗಗಳನ್ನು ಒದ್ದೆ ಮಾಡಬೇಡಿ!

2 Mins Read
Recent News

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

BIG NEWS : ನಾಳೆ 11 ಗಂಟೆಗೆ ಹೈಕಮಾಂಡ್ ಜೊತೆ ಸಭೆಯಲ್ಲಿ ಭಾಗಿಯಾಗ್ತೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಫೋನ್ ನ ಈ ಸೂಕ್ಷ್ಮ ಭಾಗಗಳನ್ನು ಒದ್ದೆ ಮಾಡಬೇಡಿ!

State News
KARNATAKA

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

By kannadanewsnow57 KARNATAKA 2 Mins Read

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಇಂಧನ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಳೆದ 12…

BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

BIG NEWS : ನಾಳೆ 11 ಗಂಟೆಗೆ ಹೈಕಮಾಂಡ್ ಜೊತೆ ಸಭೆಯಲ್ಲಿ ಭಾಗಿಯಾಗ್ತೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಫೋನ್ ನ ಈ ಸೂಕ್ಷ್ಮ ಭಾಗಗಳನ್ನು ಒದ್ದೆ ಮಾಡಬೇಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.