ಮಂಡ್ಯ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಮಧ್ಯ ಸಾಬ್ರ ಹೆಸ್ರರಿಗೆ ಏನಾದ್ರು ಪರಭಾರೆ ಮಾಡಿದ್ರೆ ನೇಣಿಗೆ ಹಾಕುವುದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದಂತಹ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಬ್ರು ಹೆಸರಿಗೆ ನೊಂದಣಿ ಮಾಡದಂತೆ ಜನರ ಮುಂದೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಇದುವರೆಗೂ ಮುಸ್ಲಿಂರ ಪರ ಇದ್ದ ಶಾಸಕ ಇದೀಗ ಸಾಬ್ರು ಎಂದು ಉಲ್ಟಾ ಹೊಡೆದಿದ್ದಾರೆ. ಬಂಡಿಸಿದ್ದೇಗೌಡರ ಈ ಒಂದು ಹೇಳಿಕೆಗೆ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದೆ.
ಕಾರ್ಯಕ್ರಮದ ಬಳಿಕ ಅಧಿಕಾರಿಗಳಿಗೆ ಬಹಿರಂಗವಾಗಿ ಧಮ್ಮಿ ಹಾಕಿದ್ದಾರೆ. ಬಗರ್ ಉಕ್ಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ ಖಾತೆ ಮಾಡದಂತೆ ತಾಕೀತು ಮಾಡಿದ್ದಾರೆ. ಸರ್ಕಾರಿ ಜಮೀನು ಸರ್ಕಾರಕ್ಕೆ ಇರಬೇಕು. ಯಾರಾದ್ರು ಅದನ್ನ ಸಾಬ್ರು ಹೆಸ್ರಿಗೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.