ಬೆಂಗಳೂರು : ಪೊಲೀಸರಿಂದ ಅಕ್ರಮವಾಗಿ ಐಪಿಎಲ್ ಟಿಕೆಟ್ ಮಾರಾಟ ದಂಧೆ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಇದೀಗ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಅವರು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿ ಎಂ ಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಅನುಚೇತ್ ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಬ್ಲಾಕ್ ನಲ್ಲಿ ಐಪಿಎಲ್ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿದ್ದರು. ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ಕೂಡ ದಾಖಲಾಗಿತ್ತು. 20,000 ನಗದು 61 ಐಪಿಎಲ್ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಆರೋಪಿಗಳಿಗೆ ಗೋವಿಂದರಾಜ ನಗರ ಪೊಲೀಸರು ನೋಟಿಸ್ ನೀಡಿದ್ದರು. ಬಂಧನದ ಭೀತಿಯಿಂದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಮೇ 17ರಂದು ಆರ್ಸಿಬಿ ಮತ್ತು ಕೆಕೆಆರ್ ನಡುವೆ ಪಂದ್ಯ ಇತ್ತು. ಈ ಪಂದ್ಯದ ಟಿಕೆಟ್ಗಳನ್ನು ವಿಜಯನಗರದ ಪಾರ್ಕ್ ಬಳಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ರೆಡ್ ಹ್ಯಾಂಡ್ ಆಗಿ ಆರೋಪಿ ಹಾಗೂ ಪೊಲೀಸರು ಸಿಕ್ಕಿ ಬಿದ್ದಿದ್ದರು.
ಟಿಕೆಟ್ ಮಾರಾಟ ದಂಧೆಯ ಪ್ರಕರಣದಲ್ಲಿ ಶಂಕರ್ ಮತ್ತು ಸುರೇಶ್ ಎನ್ನುವರನ್ನು ಅರೆಸ್ಟ್ ಮಾಡಲಾಗಿತ್ತು. ಕಾನ್ಸ್ಟೇಬಲ್ ರವಿಚಂದ್ರ ಹಾಗೂ ವೆಂಕಟಗಿರಿಗೌಡನನ್ನು ಬಂಧಿಸದೆ ಇಬ್ಬರಿಗೂ ಕೇವಲ ನೋಟಿಸ್ ನೀಡಿ ಬಿಟ್ಟಿದ್ದರು. ಸದ್ಯ ಕಾನ್ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಇಲಾಖಾ ತನಿಖೆಗೆ ಆದೇಶ ಹೊರಡಿಸಲಾಗಿದೆ.