ಹುಬ್ಬಳ್ಳಿ : ಹುಬ್ಬಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಆರೋಪಿಯನ್ನು ಬಂಧಿಸಿದ್ದಾರೆ.
ಇಂದು ಹುಬ್ಬಳ್ಳಿ ಪೊಲೀಸರು ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಿಂಗ್ ಪಿನ್ ಸಚಿನ್ ಕಬ್ಬೂರ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಅಕ್ರಮಾವಾಗಿ ಸಾಗಿಸುತ್ತಿದ್ದ 49 ಟನ್ ಅನಭಾಗ್ಯ ಅಕ್ಕಿ ಸೀಜ್ ಮಾಡಲಾಗಿತ್ತು. 2 ಲಾರಿ ಸೇರಿ ಹಲವು ವಾಹನ, 9 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಅಕ್ರಮದ ಕಿಂಗ್ ಪಿನ್ ಸಚಿನ್ ಕಬ್ಬೂರ್ ತಲೆಮರೆಸಿಕೊಂಡಿದ್ದ. ಈತ ಮೂಲತಃ ಹಾವೇರಿ ಜಿಲ್ಲೆಯವನು. ದೊಡ್ಡ ಅಪರಾಧ ಪ್ರಕರಣಗಳಲ್ಲಿಯೂ ಈತ ಭಾಗಿಯಾಗಿದ್ದಾನೆ. ಆತನ ಲೊಕೇಶನ್ ಭಾರತದಲ್ಲಿಯೇ ಕಂಡುಬರುತ್ತಿತ್ತು. ಆದರೆ ಆತ ದುಬೈನಲ್ಲಿ ವಾಸವಾಗಿದ್ದ. ಸದ್ಯ ಸಚಿನ್ ಕಬ್ಬೂರ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.