ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿ ನಗರದ ಜೋಶಿಮಾಳ್ನಲ್ಲಿ ಈ ಒಂದು ದುರ್ಘಟನೆ ನಡೆದಿದೆ.
ತಾಯಿ ಮಂಗಳಾ, ಮಗ ಸಂತೋಷ ಕುರುಡೇಕರ್ (44) ಹಾಗು ಮಗಳು ಸುವರ್ಣ ಮೃತ ದುರ್ದೈವಿಗಳಾಗಿದ್ದು, ಇನ್ನೊರ್ವ ಮಗಳು ಸುನಂದ ಕುರುಡೇಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಮೃತ ಸಂತೋಷ್ ಅಕ್ಕಸಾಲಿಗರಾಗಿ ಕೆಲಸ ಮಾಡುತ್ತಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದರು ಎಂದು ಮಾಹಿತಿ ತಿಳಿದು ಬಂದಿದೆ ಇನ್ನು ಬೆಳಿಗ್ಗೆ 9 ಗಂಟೆಗೆ 4 ಜನ ವಿಷ ಸೇವಿಸಿದ್ದಾರೆ. ತಾಯಿ ಇಬ್ಬರು ಹೆಣ್ಣುಮಕ್ಕಳ ಜೊತೆಗೆ ಮಗ ಸಂತೋಷ ಕೂಡ ಇದ್ದರು. ಇದರಲ್ಲಿ ಸಂತೋಷ್ ಸುವರ್ಣ ಹಾಗೂ ತಾಯಿ ಮಂಗಳ ಸಾವನ್ನಪ್ಪಿದ್ದು, ಇನ್ನೋರ್ವ ಮಗಳಾದ ಸುನಂದ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಡೀ ಕುಟುಂಬ ಆತ್ಮಾತೆಗೆ ಯತ್ನಿಸಿದ್ದು ಸಾಕಷ್ಟು ಪ್ರಶ್ನೆ ಮೂಡಿಸುತ್ತಿದೆ.ನಗರ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.