ನವದೆಹಲಿ : ದೆಹಲಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಯುಪಿಎಸ್ಸಿ ಆಕಾಂಕ್ಷಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಮ್ಮು ಮೂಲದ ತರುಣ ಠಾಕೂರ್ (25) ಎನ್ನುವ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದೆಹಲಿಯ ರಾಜೇಂದರ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಯುಪಿಎಸ್ಸಿ ಪರೀಕ್ಷೆಗೆ ತರುಣ ಠಾಕೂರ್ ತಯಾರಿ ನಡೆಸುತ್ತಿದ್ದ ರಾಜಿಂದರ್ ನಗರದಲ್ಲಿ ತರುಣ್ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ನನ್ನ ಸಾವಿಗೆ ನಾನೇ ಹೊಣೆ ಎಂದು ಡೆತ್ ನೋಟ್ ನಲ್ಲಿ ತರುಣ್ ಉಲ್ಲೇಖ ಮಾಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.