ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಜೈಲಿನ ಶೌಚಾಲಯದ ಕೆಟ್ಟಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಕೈದಿ ಮಹಾಂತೇಶ್ (29) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಗದಗ ಮೂಲದ ಮಹಾಂತೇಶ್ ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ. ಗದಗದಿಂದ ಧಾರವಾಡಕ್ಕೆ ಮಹಾಂತೇಶ ಕುಂಬಾರ ಶಿಫ್ಟ್ ಆಗಿದ್ದ. ನಿನ್ನೆ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹಾಗಾಗಿ ಮಹಾಂತೇಶ್ ಕುಂಬಾರ್ ಮಾನಸಿಕವಾಗಿ ನೊಂದಿದ್ದ. ಜೈಲಿನಲ್ಲಿ ಮಹಾಂತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








