ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಬಿಜೆಪಿ ಹೇಳಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎನ್.ರವಿಕುಮಾರ್ ಅವರಿಗೆ ಈ ಒಂದು ಹೇಳಿಕೆಯಿಂದಾಗಿ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದೆ.
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ರವಿಕುಮಾರ್, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಲಾಗಿತ್ತು. ಈ ಸಂಬಂಧ ಎಫ್ಐಆರ್ ಸಹ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ.
ರವಿಕುಮಾರ್ ಹೇಳಿದ್ದೇನು?
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ನಾಲಿಗೆ ಹರಿಬಿಟ್ಟಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು.