ವಿಜಯನಗರ : ಜಮಿನಲ್ಲಿ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ ವಿರೋಧ ವ್ಯಕ್ತಪಡಿಸಿದ್ದು, ರೈತನ ವಿರೋಧದ ನಡುವೆಯೂ ಕೂಡ ಇಲಾಖೆಯ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ. ಹಾಗಾಗಿ ಸಿಬ್ಬಂದಿ ವರ್ತನೆಗೆ ಬೇಸತ್ತು ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ ತಂಡದಲ್ಲಿ ವಿಷ ಸೇವಿಸಿ ಗಜೇಂದ್ರ ನಾಯಕ (48) ಮಟ್ಟು ಪತ್ನಿ ವಿಜಯಲಕ್ಷ್ಮಿ ಬಾಯಿ (38) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ದಂಪತಿಗಳನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರ ಜಮೀನಿನಲ್ಲಿ 220 ಕೆವಿ ವಿದ್ಯುತ್ ಲೈನ್ ಹಾದುಹೋಗಿದೆ.
ನನಗೆ ಇರುವುದು ಒಂದೇ ಎಕರೆ ಜಮೀನು ಹೀಗಾಗಿ ಜಮೀನಿನಲ್ಲಿ ವಿದ್ಯುತ್ ಲೈನ್ ಹಾಕದಂತೆ ರೈತ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಸಿಬ್ಬಂದಿಗಳು ಕಾಮಗಾರಿ ಆರಂಭಿಸಿದ್ದಾರೆ. ವಿದ್ಯುತ್ ಇಲಾಖೆಯ ವರ್ತನೆಗೆ ಬೇಸತ್ತು ದಂಪತಿಗಳು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.