ಬಾಗಲಕೋಟೆ : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದು ಫಿಕ್ಸ್ ಎಂದು ಬಾಗಲಕೋಟೆಯಲ್ಲಿ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಥಮವಾಗಲಿದೆ ಎಂದು ಸ್ಪೋಟಕ ಭವಿಷ್ಯ ನೋಡಿದ್ದರು.
ಬಾಗಲಕೋಟೆಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ, ಮಾತನಾಡಿದ ಅವರು ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದು ಫಿಕ್ಸ್. ಯಾವುದೇ ಕ್ಷಣದಲ್ಲಾದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ನೂರಕ್ಕೆ ನೂರು ಸರ್ಕಾರ ಪತನವಾಗಲಿದೆ.ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಿದ್ದಾಗ ಕಾಂಗ್ರೆಸ್ ನವರೇ ಸರ್ಕಾರವನ್ನು ಕೆಡವಿದ್ದರು.
ರಾಜ್ಯದಲ್ಲಿ ಈಗಲೂ ಕಾಂಗ್ರೆಸ್ ನಾಯಕರಿಂದಲೇ ಸರ್ಕಾರ ಬೀಳುತ್ತದೆ. ಅಧಿಕಾರ ಹಸ್ತಾಂತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಸಚಿವ ಕೆ.ಎನ್ ರಾಜಣ್ಣ ಸಹ ರಾಜ್ಯದಲ್ಲಿ ಕ್ರಾಂತಿಯಾಗಲಿದೆ ಎಂದಿದ್ದಾರೆ. ಸಚಿವ ರಾಜಣ್ಣ ಅವರ ಮಾತು ಕೇಳಿದರೆ ಸರ್ಕಾರ ಪತನವಾಗಲಿದೆ ರಾಜ್ಯದಲ್ಲಿ ನಾವು ಮತ್ತೆ ಬಿಜೆಪಿ ಬಾವುಟ ಹಾರಿಸುವ ಕೆಲಸ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀರಾಮಲು ಹೇಳಿಕೆ ನೀಡಿದರು.