Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮೊಬೈಲ್ ಆಪ್ ಮೂಲಕವೂ `ಒಳಮೀಸಲಾತಿ’ ಸಮೀಕ್ಷೆಗೆ ಅವಕಾಶ : CM ಸಿದ್ದರಾಮಯ್ಯ
KARNATAKA

BREAKING : ರಾಜ್ಯದಲ್ಲಿ ಮೊಬೈಲ್ ಆಪ್ ಮೂಲಕವೂ `ಒಳಮೀಸಲಾತಿ’ ಸಮೀಕ್ಷೆಗೆ ಅವಕಾಶ : CM ಸಿದ್ದರಾಮಯ್ಯ

By kannadanewsnow5706/05/2025 6:44 AM

ಬೆಂಗಳೂರು : ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025″ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ಬದ್ಧರಿದ್ದೇವೆ. ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಇಂದಿನಿಂದ ಮೂರು ಹಂತಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ.

2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗವು ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು. ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ? ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ? ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗಲಿದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ. ಮನೆ ಮನೆಗೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025ರ ವರೆಗೆ ಹಾಗೂ ಎರಡನೇ ಹಂತದಲ್ಲಿ 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.

ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು.
ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ. ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮನವಿ ಮಾಡುತ್ತೇನೆ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಬೇಕು ಎಂದು ಹೇಳಿದ್ದಾರೆ.

ಒಳಮೀಸಲಾತಿ ಜಾರಿ ಸಂಬಂಧ ಇಂದಿನಿಂದ ಸಮೀಕ್ಷೆ

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ಬದ್ಧರಿದ್ದೇವೆ. ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಇಂದಿನಿಂದ ಮೂರು ಹಂತಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ನಡೆಯಲಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ… pic.twitter.com/FkUkLxZgXR

— Siddaramaiah (@siddaramaiah) May 5, 2025

BREAKING: 'Internal reservation' survey allowed in the state through mobile app: CM Siddaramaiah
Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM1 Min Read

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM3 Mins Read

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM3 Mins Read
Recent News

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM
State News
KARNATAKA

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

By kannadanewsnow0908/06/2025 9:16 PM KARNATAKA 1 Min Read

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ.…

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.