ಬೆಂಗಳೂರು : ತಾಜ್ಯ ನೀರು ಸಂಸ್ಕರಣ ಘಟಕ ಬಳಸದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಬಂದ್ ಮಾಡುವಂತೆ ನೋಟಿಸ್ ನೀಡಿ ನಿನ್ನೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಗಿತ್ತು. ಇದರ ಬೆನ್ನಲ್ಲೆ ಇದೀಗ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಿದ್ಯುತ್ ಕಡಿತ ಮಾಡುವ ಕುರಿತು ಬೆಸ್ಕಾಂ ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.
ಹೌದು ವೆಲ್ ಸ್ಟುಡಿಯೋಗೆ ನೋಟಿಸ್ ನೀಡಲು ಇದೀಗ ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸಂಬಂಧ ನೀಡಲು ಮುಂದಾಗಿದೆ . ವೆಲ್ತ್ ಸ್ಟುಡಿಯೋಸ್ ಬಳಿಗೆ ಬೆಸ್ಕಾಂ ಅಧಿಕಾರಿಗಳು ನೋಟಿಸ್ ನೀಡಲು ಆಗಮಿಸಿದ್ದಾರೆ ಜಾಲಿವುಡ್ ಸ್ಟುಡಿಯೋ ಬಳಿ ಬಂದ ಬಿಡದಿ AEE ಮೋಹಿತಾ ಆಗಮಿಸಿದ್ದು, ನೋಟಿಸ್ ಸ್ವೀಕರಿಸಲು ಯಾವುದೇ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ಸ್ಟುಡಿಯೋದ ಗೇಟ್ ಸಿ ಬಳಿ ಬೆಸ್ಕಾಂ ಅಧಿಕಾರಿಗಳು ತೆರಳಿದ್ದಾರೆ..