ಬೀದರ್ : ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲು ಬೀದರ್ ಆಸ್ಪತ್ರೆಗೆ ಹೋಗಿದ್ದ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಆಸ್ಪತ್ರೆ ಲಿಫ್ಟ್ ಏಕಾಏಕಿ ಕೈಕೊಟ್ಟಿದ್ದರಿಂದ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ಲಿಫ್ಟ್ ರಿಪೇರಿ ಮಾಡಿ ಬಾಗಿಲು ತೆರೆದಾಗ ಸಚಿವರು, ಎಂಎಲ್ ಸಿ ಲಿಫ್ಟ್ ನಿಂದ ಹೊರ ಬಂದಿದ್ದಾರೆ.
102 ವರ್ಷದ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲ ದಿನಗಳಿಂದ ಬೀದರ್ ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಣ್ಣ ಖಂಡ್ರೆ ಭೇತಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ.








