ಬೆಂಗಳೂರು : ಕನ್ನಡವು ತಮಿಳಿನಿಂದ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ರಾಜ್ಯದಲ್ಲಿ ಕಮಲಹಾಸನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಇದೀಗ ಅನುಮತಿ ಇಲ್ಲದೆ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಹಾಕಿ ಪ್ರತಿಭಟನೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ.
ಹೌದು ಬಸವೇಶ್ವರ ಠಾಣೆ ಪೋಲಿಸರಿಂದ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿದ್ದಕ್ಕೆ ಪ್ರತಿಭಟನಾಕಾರರ ವಿರುದ್ಧ ಸಮೋಟೋ ಕೇಸ್ ದಾಖಲಾಗಿದೆ. ಕಮಲ್ ಹಾಸನ್ ಭಾವಚಿತ್ರ ಹಿಡಿದು ಪ್ರತಿಭಟಸುತ್ತಿದ್ದರು. ನಮ್ಮ ಕರುನಾಡು ಯುವ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅನುಮತಿ ಇಲ್ಲದೆ ಪ್ರತಿಭಟಿಸಿದ್ದಾರೆ ಎಂದು ಇದೀಗ FIR ದಾಖಲಾಗಿದೆ.
ಇದೀಗ ಕಮಲ್ ಹಾಸನ್ ವಿರುದ್ಧ ಧರಣಿ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಮಲ್ ಹಾಸನ ವಿರುದ್ಧ ಪ್ರತಿಭಟಿಸಿದವರಿಗೆ ಬಿಗ್ ಶಾಕ್ ಎದುರಾಗಿದೆ. ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಾಕಿದ್ದಕ್ಕೆ FIR ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.